ADVERTISEMENT

ಪರ್ವತಾರೋಹಿಗಳಿಗೆ ಹಣಕಾಸಿನ ನೆರವು ನೀಡಲು ಸಿಐಎಲ್‌ ಚಿಂತನೆ

ಪಿಟಿಐ
Published 20 ಆಗಸ್ಟ್ 2023, 14:41 IST
Last Updated 20 ಆಗಸ್ಟ್ 2023, 14:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಂಚಿ (ಜಾರ್ಖಂಡ್‌): ಭವಿಷ್ಯದ ಪರ್ವತಾರೋಹಿಗಳಿಗೆ ಹಣಕಾಸಿನ ನೆರವು ನೀಡುವ ಸಲುವಾಗಿ ನೀತಿಯೊಂದನ್ನು ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಕೋಲ್ ಇಂಡಿಯಾ ಲಿಮಿಟೆಡ್‌ನ (ಸಿಐಎಲ್) ಅಧ್ಯಕ್ಷ ಪಿ.ಎಂ. ಪ್ರಸಾದ್‌ ಭಾನುವಾರ ಹೇಳಿದ್ದಾರೆ.

‘ಎವರೆಸ್ಟ್‌ ಶೃಂಗಸಭೆ’ಯನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪರ್ವತಾರೋಹಣವು ಕಷ್ಟದ ಕೆಲಸ ಮಾತ್ರವಲ್ಲ ವೆಚ್ಚದಾಯಕವೂ ಹೌದು ಎಂದಿದ್ದಾರೆ.

ರಾಂಚಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಮೌಂಟ್‌ ಎವರೆಸ್ಟ್‌ ಏರಿದ್ದ 14 ಮಂದಿ ಪರ್ವತಾರೋಹಿಗಳನ್ನು ಸನ್ಮಾನಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.