ಹೈದರಾಬಾದ್:ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ತಿರುಚಿದ ಚಿತ್ರವನ್ನು ಟ್ವಿಟರ್ನಲ್ಲಿ ಪ್ರಕಟಿಸಿದ ಕಾರಣಕ್ಕೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಇಲ್ಲಿ ಪ್ರಕರಣ ದಾಖಲಾಗಿದೆ.
ನಾಯ್ಡು ಅವರು ವೈಎಸ್ಆರ್ ಕಾಂಗ್ರೆಸ್ನ ರುಮಾಲು ಧರಿಸಿಕೊಂಡು, ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಜತೆ ನಿಂತಿರುವಂತೆ ತಿರುಚಲಾಗಿರುವ ಚಿತ್ರವನ್ನು ವರ್ಮಾ ಟ್ವೀಟ್ ಮಾಡಿದ್ದರು. ‘ವಾವ್, ಆಘಾತಕಾರಿ ತಿರುವು. ಚಂದ್ರಬಾಬು ನಾಯ್ಡು ವೈಎಸ್ಆರ್ಸಿ ಸೇರಿದರೆ?’ ಎಂದು ಟ್ವೀಟ್ನಲ್ಲಿ ಬರೆದಿದ್ದರು.
ಈ ಟ್ವೀಟ್ ವಿರುದ್ಧ ತೆಲುಗು ದೇಶಂ ಪಕ್ಷದ ವಿ.ಡಿ.ವಿ.ವಿ. ಸತ್ಯನಾರಾಯಣ ಅವರು ಪಶ್ಚಿಮ ಗೋದಾವರಿ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವರ್ಮಾ ತಕ್ಷಣವೇ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.