ನವದೆಹಲಿ: ಯೋಗ ಗುರುಬಾಬಾ ರಾಮ್ದೇವ್ಅವರ ಅಶ್ಲೀಲ ಕಾರ್ಟೂನ್ಗಳನ್ನುರಚನೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಹರಿದ್ವಾರದ ಪೊಲೀಸ್ ಠಾಣೆಗೆ ಪತಂಜಲಿ ಯೋಗಪೀಠ ದೂರು ನೀಡಿತ್ತು.ವ್ಯಂಗ್ಯಚಿತ್ರಕಾರರಾದ ಗಜೇಂದ್ರ ರಾವತ್ ಮತ್ತು ಹೇಮಂತ್ ಮಾಳವೀಯ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ವ್ಯಂಗ್ಯಚಿತ್ರಕಾರರ ವಿರುದ್ಧ ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ಅಧಿಕಾರಿಗಳು ತಿಳಿಸಿದ್ದಾರೆ
ಬಾಬಾ ರಾಮ್ದೇವ್ ಅವರ ಅಶ್ಲೀಲ ಕಾರ್ಟೂನ್ಗಳುಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳಿಂದ ವ್ಯಾಪಕವಾಗಿ ಹರಿದಾಡಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.