ADVERTISEMENT

ಕವುಜಗ ಹಕ್ಕಿ ಉಡುಗೊರೆ: ಸಿಧು ವಿರುದ್ಧ ದೂರು

ಪಿಟಿಐ
Published 14 ಡಿಸೆಂಬರ್ 2018, 14:13 IST
Last Updated 14 ಡಿಸೆಂಬರ್ 2018, 14:13 IST
ನವಜೋತ್‌ ಸಿಂಗ್‌ ಸಿಧು
ನವಜೋತ್‌ ಸಿಂಗ್‌ ಸಿಧು    

ಚಂಡೀಗಡ: ಕವುಜಗ ಹಕ್ಕಿಯನ್ನು ಉಡುಗೊರೆಯಾಗಿ ಪಡೆದ ಪಂಜಾಬ್‌ನ ಸಚಿವ ನವಜೋತ್‌ ಸಿಂಗ್‌ ಸಿಧು ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರಾಣಿ ಹಕ್ಕು ಸಂಘಟನೆಗಳ ಇಬ್ಬರು ಕಾರ್ಯಕರ್ತರು ವನ್ಯಜೀವಿ ಅಪರಾಧ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದಾರೆ.

ಕರ್ತಾರಪುರ ಕಾರಿಡಾರ್‌ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಚೆಗೆ ಪಾಕಿಸ್ತಾನಕ್ಕೆ ತೆರಳಿದ್ದ ಸಿಧು ಅವರಿಗೆ ಅಲ್ಲಿನ ಪತ್ರಕರ್ತರೊಬ್ಬರು ಈ ಹಕ್ಕಿಯನ್ನು ಉಡುಗೊರೆಯಾಗಿ ನೀಡಿದ್ದರು.

ಸಿಧು ಅವರು ಈ ಹಕ್ಕಿಯನ್ನು ಡಿ.12ರಂದು ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಅವರಿಗೆ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.