ADVERTISEMENT

ಕೇರಳ: ಗುರುವಾರ ಮುಂಗಾರು ಪ್ರವೇಶಕ್ಕೆ ವಾತಾವರಣ ಪಕ್ವ: ಐಎಂಡಿ

ಪಿಟಿಐ
Published 2 ಜೂನ್ 2021, 8:25 IST
Last Updated 2 ಜೂನ್ 2021, 8:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ನೈರುತ್ಯ ಮುಂಗಾರು ಕೇರಳಕ್ಕೆ ಗುರುವಾರ ಪ್ರವೇಶಿಸಲಿದ್ದು, ಅದಕ್ಕೀಗ ವಾತಾವರಣ ಪಕ್ವಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಸಾಮಾನ್ಯವಾಗಿ ಕೇರಳಕ್ಕೆ ಜೂನ್‌ 1ರಂದು ಮುಂಗಾರು ಮಳೆ ಪ್ರವೇಶಿಸುತ್ತಿತ್ತು.

ಉಪಗ್ರಹ ಚಿತ್ರಗಳ ಪ್ರಕಾರ, ಕೇರಳ ಕರಾವಳಿ ಮತ್ತು ಪಕ್ಕದ ಅರಬ್ಬಿ ಸಮುದ್ರದ ಆಗ್ನೇಯ ದಿಕ್ಕಿನಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ. ಇದರಿಂದ ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

‘ಈ ವರ್ಷ ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು, 4 ದಿನ ವ್ಯತ್ಯಾಸವೂ ಆಗಬಹುದು’ ಎಂದು ಇಲಾಖೆ ತಿಳಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.