ADVERTISEMENT

ಜೈರಾಂ ರಮೇಶ್‌ಗೆ ಕಾಂಗ್ರೆಸ್‌ ಪಕ್ಷದ ಪ್ರಚಾರ, ಮಾಧ್ಯಮ ಉಸ್ತುವಾರಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 19:53 IST
Last Updated 16 ಜೂನ್ 2022, 19:53 IST
ಜೈರಾಂ ರಮೇಶ್‌
ಜೈರಾಂ ರಮೇಶ್‌   

ನವದೆಹಲಿ: ಕಾಂಗ್ರೆಸ್‌ ಪಕ್ಷವು ಸಂವಹನ, ಪ್ರಚಾರ ಮತ್ತು ಮಾಧ್ಯಮ ವಿಭಾಗದ ಉಸ್ತುವಾರಿಯಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಅವರನ್ನು ನೇಮಿಸಿದೆ. ರಣದೀಪ್‌ ಸುರ್ಜೇವಾಲಾ ಬದಲಿಗೆ ಇವರು ನೇಮಕಗೊಂಡಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಸಭೆ ಸದಸ್ಯ ಜೈರಾಂ ರಮೇಶ್‌ ಅವರಿಗೆ ಹೊಸ ಜವಾಬ್ದಾರಿಯನ್ನು ವಹಿಸಲಾಗಿದೆ. ಸುರ್ಜೇವಾಲಾ ಅವರು ಪಕ್ಷದ ಕರ್ನಾಟಕದ ಉಸ್ತುವಾರಿಯಾಗಿ ಮುಂದುವರಿಯುವರು ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT