ನವದೆಹಲಿ: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ಕೋರುವ ಹೋರಾಟದ ವಿಚಾರವಾಗಿ ಪಕ್ಷಕ್ಕೆ ಮುಜುಗರ ಉಂಟು ಮಾಡುವಂತಹ ನಕಲಿ ಪತ್ರವೊಂದನ್ನು ಪ್ರಕಟಿಸಿರುವ ಕನ್ನಡದ ದಿನಪತ್ರಿಕೆ ಹಾಗೂ ವಾಹಿನಿಯೊಂರ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ಕೋರಿ ಕಾಂಗ್ರೆಸ್ ಪಕ್ಷವು ಕೇಂದ್ರ ಚುನಾವಣಾ ಆಯೋಗಕ್ಕೆ ಸೋಮವಾರ ದೂರು ನೀಡಿದೆ.
ವಿಜಯಪುರದ ಬಿಎಲ್ಡಿಇ ಸಂಸ್ಥೆಯ ಮುಖ್ಯಸ್ಥ, ಸಚಿವ ಎಂ.ಬಿ. ಪಾಟೀಲ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ 2017ರಲ್ಲಿ ಬರೆದಿದ್ದಾರೆ ಎನ್ನಲಾದ ನಕಲಿ ಪತ್ರವನ್ನು ಲೋಕಸಭೆ ಚುನಾವಣೆ ಸಂದರ್ಭ ಪ್ರಕಟಿಸುವ ಮೂಲಕ ಈ ಮಾಧ್ಯಮ ಸಂಸ್ಥೆಗಳು ಪಕ್ಷಕ್ಕೆ ಧಕ್ಕೆ ಉಂಟು ಮಾಡಲು ಯತ್ನಿಸಿವೆ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಆಯೋಗಕ್ಕೆ ದೂರು ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.
ಮತದಾನಕ್ಕೆಂದು ತೆರಳಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮತಗಟ್ಟೆಯಿಂದ ಹೊರಬಂದು, ‘ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ’ ಎಂಬ ಹೇಳಿಕೆ ನೀಡುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.