ADVERTISEMENT

ಬಜೆಟ್ ಅಧಿವೇಶನ: ಸಂಸದೆ ರಜನಿ ಅಶೋಕರಾವ್ ಅಮಾನತು 

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2023, 14:15 IST
Last Updated 10 ಫೆಬ್ರುವರಿ 2023, 14:15 IST
   

ನವದೆಹಲಿ: ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನಕರ್‌ ಅವರು ಕಾಂಗ್ರೆಸ್ ಸಂಸದ ರಜನಿ ಅಶೋಕ್ ರಾವ್ ಪಾಟೀಲ್ ಅವರನ್ನು ಪ್ರಸಕ್ತ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ಗದ್ದಲ ಚಿತ್ರೀಕರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದ ಧನಕರ್, ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಂತೆ ರಾಜಕೀಯ ಪಕ್ಷಗಳ ನಾಯಕರನ್ನು ಕೇಳಿದರು.

ಬಳಿಕ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಪಾಟೀಲ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.