ADVERTISEMENT

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ:ತ್ರಿಪಾಠಿ ನಾಮಪತ್ರ ತಿರಸ್ಕೃತ– ಖರ್ಗೆ vs ತರೂರ್

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ

ಪಿಟಿಐ
Published 1 ಅಕ್ಟೋಬರ್ 2022, 10:51 IST
Last Updated 1 ಅಕ್ಟೋಬರ್ 2022, 10:51 IST
   

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಜಾರ್ಖಂಡ್‌ನ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ. ಹೀಗಾಗಿ, ಅಂತಿಮ ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರ್ ಉಳಿದಿದ್ದು, ಇವರಿಬ್ಬರ ನಡುವೆ ಪೈಪೋಟಿ ಏರ್ಪಡಲಿದೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಶುಕ್ರವಾರ ಖರ್ಗೆ, ತರೂರ್ ಮತ್ತು ತ್ರಿಪಾಠಿ ನಾಮಪತ್ರ ಸಲ್ಲಿಸಿದ್ದರು.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ನಾಮಪತ್ರ ಸಲ್ಲಿಸುವಾಗ ಒಟ್ಟು 20 ಫಾರ್ಮ್‌ಗಳು ಬಂದಿದ್ದು, ಅವುಗಳಲ್ಲಿ ನಾಲ್ಕು ತಿರಸ್ಕೃತವಾಗಿವೆ ಎಂದು ಹೇಳಿದರು.

ADVERTISEMENT

ಖರ್ಗೆ 14 ಫಾರ್ಮ್‌ಗಳನ್ನು ಸಲ್ಲಿಸಿದರೆ, ತರೂರ್ ಐದು ಮತ್ತು ತ್ರಿಪಾಠಿ ಒಂದು ಫಾರ್ಮ್ ಅನ್ನು ಸಲ್ಲಿಸಿದ್ದರು.

ಸಹಿ ಹೊಂದಿಕೆಯಾಗದ ಕಾರಣ ತ್ರಿಪಾಠಿ ಅವರ ಸೂಚಕರ ಫಾರ್ಮ್ ಅನ್ನು ತಿರಸ್ಕರಿಸಲಾಗಿದೆ ಎಂದು ಮಿಸ್ತ್ರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.