ADVERTISEMENT

ಯಾತ್ರೆಯಲ್ಲಿ ಪಾಲ್ಗೊಳ್ಳ‌ಲು ಕಾಂಗ್ರೆಸ್‌ ಒತ್ತಾಯ

ಪಿಟಿಐ
Published 7 ಜನವರಿ 2024, 20:32 IST
Last Updated 7 ಜನವರಿ 2024, 20:32 IST
ಜೈರಾಮ್‌ ರಮೇಶ್‌
ಜೈರಾಮ್‌ ರಮೇಶ್‌   

ನವದೆಹಲಿ: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನದ ರಕ್ಷಣೆಯ ಆಶಯ ಹೊಂದಿರುವ ಸಂಘಟನೆಗಳು ಮತ್ತು ಜನರನ್ನು ‘‌ಭಾರತ್‌ ಜೋಡೊ ನ್ಯಾಯ ಯಾತ್ರೆ’ಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್‌ ಭಾನುವಾರ ಆಹ್ವಾನಿಸಿದೆ.

ಜನವರಿ 14ರಿಂದ ಆರಂಭವಾಗಲಿರುವ ಈ ಯಾತ್ರೆಯು ಮಣಿಪುರದಿಂದ ಮುಂಬೈವರೆಗೆ ಸಾಗಲಿದೆ.

‘ಪ್ರತಿಯೊಬ್ಬ ಭಾರತೀಯನ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯಕ್ಕಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಎಕ್ಸ್‌ನಲ್ಲಿ ಹೇಳಿದ್ದಾರೆ.

ADVERTISEMENT

ಯಾತ್ರೆಯು ಮಾರ್ಚ್‌ 20 ಅಥವಾ 21ರಂದು ಮುಂಬೈನಲ್ಲಿ ಸಮಾರೋಪಗೊಳ್ಳಲಿದೆ ಎಂದು‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.