ADVERTISEMENT

ಚುನಾವಣೆಯಲ್ಲಿ ಗೆದ್ದರೆ ಹಳೆಯ ಪಿಂಚಣಿ ಯೋಜನೆ ಮತ್ತೆ ಜಾರಿ: ಪ್ರಿಯಾಂಕಾ ಗಾಂಧಿ

ಪಿಟಿಐ
Published 10 ನವೆಂಬರ್ 2022, 16:00 IST
Last Updated 10 ನವೆಂಬರ್ 2022, 16:00 IST
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ   

ಶಿಮ್ಲಾ: ‘ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನ ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವು ಸಾಧಿಸಿದರೆ ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೆ ತರಲಾಗುವುದು’ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಹೇಳಿದ್ದಾರೆ.

ಈ ಕುರಿತುಫೇಸ್‌ಬುಕ್‌ನಲ್ಲಿ ಪ್ರಿಯಾಂಕಾ ಅವರು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು,‘ಹಳೆಯ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಮೂಲಕ ಬಿಜೆಪಿಯು ವೃದ್ಧರ ಆರ್ಥಿಕ ಭದ್ರತೆಯನ್ನು ಕಸಿದುಕೊಂಡಿದೆ’ ಎಂದು ಆರೋಪಿಸಿದ್ದಾರೆ.

‘ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರತಿಯೊಬ್ಬ ಉದ್ಯೋಗಿಯು ಪಿಂಚಣಿ ಪಡೆಯಬೇಕೆಂದು ಕಾಂಗ್ರೆಸ್‌ ನಂಬುತ್ತದೆ. ಪಿಂಚಣಿ ಪ್ರತಿ ಉದ್ಯೋಗಿಯ ಹಕ್ಕು. ಇದನ್ನು ಗಮನದಲ್ಲಿರಿಸಿಕೊಂಡೇ ಛತ್ತೀಸಗಡ ಹಾಗೂ ರಾಜಸ್ಥಾನದ ಕಾಂಗ್ರೆಸ್‌ ಸರ್ಕಾರಗಳು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿವೆ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.