ನವದೆಹಲಿ: ಛತ್ತೀಸಗಡದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮುನ್ನೆಲೆಗೆ ಬಂದಿರುವ ನಡುವೆಯೇ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಮತ್ತಷ್ಟು ಆಪ್ತ ಶಾಸಕರು ದೆಹಲಿ ತಲುಪಿದ್ದಾರೆ.
ಬಘೇಲ್ ಅವರ ಬದಲಾವಣೆಗೆ ಈ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಂಜಾಬ್ನಲ್ಲಿ ಅಮರಿಂದರ್ ಸಿಂಗ್ ಅವರ ಬದಲಾವಣೆಯ ಬೆನ್ನಲ್ಲೇ ನಡೆಯುತ್ತಿರುವ ಛತ್ತೀಸಗಡದ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ.
2018ರ ಡಿಸೆಂಬರ್ನಲ್ಲಿ ಭೂಪೇಶ್ ಬಘೇಲ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಸಂದರ್ಭದಲ್ಲಿ ಎರಡೂವರೆ ವರ್ಷಗಳಿಗೆ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಪ್ರಸ್ತಾಪ ಮುಂದಿಡಲಾಗಿತ್ತು ಹಾಗೂ ಆ ಪ್ರಕಾರವಾಗಿ ಪ್ರಸ್ತುತ ಆರೋಗ್ಯ ಸಚಿವರಾಗಿರುವ ಟಿ.ಎಸ್.ಸಿಂಗ್ ದೇವ್ ದ್ವಿತಿಯಾರ್ಧದ ಹೊಣೆ ಹೊರಬೇಕಾಗುತ್ತದೆ.
ಟಿ.ಎಸ್.ಸಿಂಗ್ ದೇವ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಕಾತುರರಾಗಿದ್ದಾರೆ. ಅವರು ಮುಖ್ಯಮಂತ್ರಿ ಸ್ಥಾನ ಹೊರತಾಗಿ ಯಾವುದೇ ಸ್ಥಾನವನ್ನು ಪರಿಗಣಿಸಲೂ ಸಿದ್ಧರಿಲ್ಲ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.