ರಾಷ್ಟ್ರೀಯ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲಿರುವ ಈ ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಕರಡು ರಚನೆಯು ಮಹತ್ವ ಪಡೆದುಕೊಂಡಿದೆ. ಪ್ರಿಯಾಂಕಾ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ವ್ಯಾಪ್ತಿ ಮೀರಿದ ಸಮಸ್ಯೆಗಳನ್ನು ಅಧಿಕೃತವಾಗಿ ಕೈಗೆತ್ತಿಕೊಳ್ಳುತ್ತಿದ್ದಾರೆ.
ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಸರ್ಕಾರವು ಪ್ರತಿ ತಿಂಗಳು ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸುತ್ತಿದೆ. ಮೂರು-ನಾಲ್ಕು ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 60 ರಿಂದ 70 ಬಾರಿ ಹೆಚ್ಚಿಸಲಾಗಿದೆ ಎಂದು ಕಿಡಿಕಾರಿದರು.
19 ರಾಜಕೀಯ ಪಕ್ಷಗಳ ನಾಯಕರು ಸೆಪ್ಟೆಂಬರ್ 20ರಿಂದ 30 ರವರೆಗೆ ದೇಶದಾದ್ಯಂತ ಜಂಟಿಯಾಗಿ ಪ್ರತಿಭಟನೆ ಆಯೋಜಿಸುವುದಾಗಿ ಆ.20 ರಂದು ಘೋಷಿಸಿದ ನಂತರ ಈ ಸಮಿತಿ ರಚಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.