ನವದೆಹಲಿ: ಇದೇ 16ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಲಾಗಿದೆ.
ಸದ್ಯದ ರಾಜಕೀಯ ಪರಿಸ್ಥಿತಿ, ಪಕ್ಷದ ಆಂತರಿಕ ವಿದ್ಯಮಾನಗಳು ಮತ್ತು ಮುಂಬರುವ ವಿಧಾನಸಭೆ ಚುನಾವಣೆಗಳ ಸಿದ್ಧತೆ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ ಎಂದು ‘ಎಎನ್ಐ’ ವರದಿ ಮಾಡಿದೆ.
ಓದಿ:ಕಾಂಗ್ರೆಸ್ ಮೂಲ ಸಮಸ್ಯೆಗಳಿಗೆ ತ್ವರಿತಗತಿಯ ಪರಿಹಾರವಿಲ್ಲ: ಪ್ರಶಾಂತ್ ಕಿಶೋರ್
ಪಕ್ಷವು ಈ ತಿಂಗಳು ಸಭೆ ಕರೆಯುವ ಸಾಧ್ಯತೆ ಇದೆ ಎಂದು ಕೆಲವು ದಿನಗಳ ಹಿಂದೆ ಮೂಲಗಳು ತಿಳಿಸಿದ್ದವು. ಪಕ್ಷದೊಳಗಿನ ಭಿನ್ನಮತ, ಪ್ರಮುಖ ನಾಯಕರು ಪಕ್ಷ ತ್ಯಜಿಸುತ್ತಿರುವ ಬಗ್ಗೆ ಸಭೆ ಕರೆದು ಚರ್ಚಿಸಬೇಕು ಎಂದು ‘ಜಿ–23’ರ ಮುಖಂಡರು ಸೇರಿದಂತೆ ಅನೇಕ ನಾಯಕರು ಇತ್ತೀಚೆಗೆ ಆಗ್ರಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.