ನವದೆಹಲಿ:ಕೇಂದ್ರ ಸರ್ಕಾರವುಬ್ರಿಟನ್ ಸಂಸದೆಡೆಬ್ಬಿ ಅಬ್ರಹಾಮ್ಸ್ ಅವರಿಗೆವೀಸಾ ನಿರಾಕರಿಸಿರುವುದನ್ನು ಕಾಂಗ್ರೆಸ್ ಹಿರಿಯ ನಾಯಕ ಅಭಿಷೇಕ್ ಸಿಂಘ್ವಿ ಬೆಂಬಲಿಸಿದ್ದಾರೆ. ಮಾತ್ರವಲ್ಲದೆ, ಡೆಬ್ಬಿ ಪಾಕಿಸ್ತಾನದಮುಖವಾಡ ಧರಿಸಿದ್ದಾರೆಎಂದು ಹೇಳಿದ್ದಾರೆ.
‘ಡೆಬ್ಬಿ ಅಬ್ರಹಾಮ್ಸ್ ಅವರಿಗೆ ಭಾರತ ಪ್ರವೇಶ ನಿರಾಕರಿಸಿರುವುದು ಅವಶ್ಯವಾಗಿತ್ತು. ಅವರು ಕೇವಲ ಸಂಸದೆಯಾಗಿಲ್ಲ. ಪಾಕ್ ಮುಖವಾಡ ಧರಿಸಿರುವ ಅವರುಪಾಕಿಸ್ತಾನದ ಇ–ಆಡಳಿತ ಮತ್ತು ಐಎಸ್ಐನೊಂದಿಗೆ ಉತ್ತಮ ನಂಟು ಹೊಂದಿದ್ದಾರೆ.ಭಾರತದ ಸಾರ್ವಭೌಮತ್ವದ ಮೇಲೆ ದಾಳಿ ನಡೆಸುವ ಪ್ರತಿಯೊಂದು ಪ್ರಯತ್ನಕ್ಕೂ ತಡೆಯೊಡ್ಡಬೇಕು’ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಅಬ್ರಹಾಮ್ಸ್,ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದರು.
ಭಾನುವಾರ ದುಬೈನಿಂದ ಭಾರತಕ್ಕೆ ಬಂದಿದ್ದ ಅಬ್ರಹಾಮ್ಸ್ ಅವರನ್ನು ವಾಪಸ್ ಕಳುಹಿಸಲಾಗಿತ್ತು. ಮಾನ್ಯತೆ ಪಡೆದ ವೀಸಾ ಹೊಂದಿರದ ಕಾರಣ ಭಾರತ ಪ್ರವೇಶ ನಿರಾಕರಿಸಲಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೇಬರ್ ಪಕ್ಷದ ಸಂಸದೆಯಾಗಿರುವ ಅಬ್ರಹಾಮ್ಸ್, ಕಾಶ್ಮೀರಕ್ಕೆ ತೆರಳುವ ಸಂಸತ್ ಸದಸ್ಯರ ತಂಡದ ಅಧ್ಯಕ್ಷರೂ ಆಗಿದ್ದಾರೆ. ದುಬೈನಿಂದ ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 9ಕ್ಕೆ, ಭಾರತದ ಹರ್ಪ್ರೀತ್ ಉಪಲ್ ಜೊತೆಗೆ ಅವರು ಬಂದಿಳಿದರು.
ಇದನ್ನೂ ಓದಿ: ಬ್ರಿಟನ್ ಸಂಸದೆಗೆ ಭಾರತ ಪ್ರವೇಶ ಇಲ್ಲ
ಭಾರತಕ್ಕೆ ಬರುವ ಮೊದಲೇ ಅವರ ಇ–ವೀಸಾ ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಲಾಗಿತ್ತು. ಆದರೂ, ಅವರು ಭಾರತಕ್ಕೆ ಬಂದಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.ಇ–ವೀಸಾ ರದ್ದತಿಗೆ ಯಾವುದೇ ಕಾರಣವನ್ನು ತಿಳಿಸಿಲ್ಲ.
ಅಬ್ರಹಾಮ್ಸ್ ಅವರಿಗೆ ಕಳೆದ ಅಕ್ಟೋಬರ್ನಲ್ಲಿ ಇ–ವೀಸಾ ನೀಡಲಾಗಿತ್ತು. ಇದರ ಅವಧಿ 2020ರ ಅಕ್ಟೋಬರ್ವರೆಗೆ ಇತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.