ನವದೆಹಲಿ: ಕೋವಿಡ್–19 ನಿಯಂತ್ರಿಸುವಲ್ಲಿ ಸರ್ಕಾರ ರೂಪಿಸಿದ ಕಾರ್ಯತಂತ್ರಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಟೀಕಿಸಿದ್ದಾರೆ.
‘ಮನಬಂದಂತೆ ಲಾಕ್ಡೌನ್ ಹೇರುವುದು, ಗಂಟೆ ಬಾರಿಸುವುದು ಮತ್ತು ದೇವರನ್ನು ಪ್ರಾರ್ಥಿಸಿ ಹಾಡುವುದು’ ಸರ್ಕಾರದ ಕಾರ್ಯತಂತ್ರಗಳಾಗಿವೆ ಎಂದು ವ್ಯಂಗ್ಯವಾಡಿದ್ದಾರೆ.
ಕೋವಿಡ್–19 ನಿಯಂತ್ರಣ ಮತ್ತು ಲಸಿಕೆ ಅಭಿಯಾನದ ಕುರಿತು ಸರ್ಕಾರ ಕೈಗೊಂಡ ನಿರ್ಧಾರಗಳು ಮತ್ತು ಯೋಜನೆಗಳನ್ನು ಈ ಹಿಂದೆಯೂ ಕಾಂಗ್ರೆಸ್ ಟೀಕಿಸಿತ್ತು. ವೈಜ್ಞಾನಿಕವಾಗಿ ಮತ್ತು ಸಮಗ್ರವಾಗಿ ಯೋಜನೆ ರೂಪಿಸದೆ ಸರ್ಕಾರ ಮನಸ್ಸಿಗೆ ಬಂದಂತೆ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಇದರಿಂದ, ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಾಂಗ್ರೆಸ್ ಹೇಳಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.