ADVERTISEMENT

ಕಾಂಗ್ರೆಸ್‌ ಮುಖಂಡ, ಪಂಜಾಬಿ ಗಾಯಕ ಸಿಧು ಮೂಸೆವಾಲಾಗೆ ಗುಂಡಿಕ್ಕಿ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಮೇ 2022, 13:22 IST
Last Updated 29 ಮೇ 2022, 13:22 IST
ಸಿಧು ಮೂಸೆವಾಲಾ
ಸಿಧು ಮೂಸೆವಾಲಾ   

ಚಂಡೀಗಡ: ಕಾಂಗ್ರೆಸ್‌ ಮುಖಂಡ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮಾನ್ಸಾ ಜಿಲ್ಲೆಯ ಜವಾಹರ್ಕೆ ಎಂಬ ಸ್ಥಳದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂಸೆವಾಲಾ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೂಸೆವಾಲಾ ಮೇಲೆ 30 ಕ್ಕೂ ಹೆಚ್ಚು ಸುತ್ತು ಗುಂಡು ಹಾರಿಸಲಾಗಿದೆ. ಈ ಘಟನೆಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ.

ADVERTISEMENT

ಮೂಸೆವಾಲಾ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಪಂಜಾಬ್‌ ಪೊಲೀಸರು ಶನಿವಾರವಷ್ಟೇ ಹಿಂಪಡೆದಿದ್ದರು.

ಮೂಸೆವಾಲಾ ಅವರ ಮೂಲ ಹೆಸರು ಶುಭದೀಪ್ ಸಿಂಗ್ ಸಿಧು ಎಂದಾಗಿದ್ದು, ರಾಜ್ಯದ ಮನ್ಸಾ ಜಿಲ್ಲೆಯ ಮೂಸಾ ಗ್ರಾಮದವರಾಗಿದ್ದಾರೆ. ಅವರು ಹಿಂಸೆ ಮತ್ತು ಗನ್‌ ಸಂಸ್ಕೃತಿಯನ್ನು ತನ್ನ ಹಾಡಿನಲ್ಲಿ ಉತ್ತೇಜಿಸಿದ್ದಕ್ಕಾಗಿ ಟೀಕೆಗಳನ್ನು ಎದುರಿಸಿದ್ದರು. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.