ADVERTISEMENT

ಗಣರಾಜ್ಯೋತ್ಸವ: ಧ್ವಜಾರೋಹಣ ಮುನ್ನ ಹೊಡೆದಾಡಿಕೊಂಡ ಕಾಂಗ್ರೆಸ್ ನಾಯಕರು 

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 9:38 IST
Last Updated 26 ಜನವರಿ 2020, 9:38 IST
ಹೊಡೆದಾಟದ ದೃಶ್ಯ (ಟ್ವಿಟರ್)
ಹೊಡೆದಾಟದ ದೃಶ್ಯ (ಟ್ವಿಟರ್)   

ಇಂದೋರ್: ಇಂದೋರ್‌ನಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಗಾಂಧಿ ಭವನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಎಲ್ಲ ಸಿದ್ಧತೆಗಳು ನಡೆದಿತ್ತು. ಧ್ವಜಾರೋಹಣ ಮಾಡಲು ಮುಖ್ಯಮಂತ್ರಿ ಕಮಲ್‌ನಾಥ್‌ಗಾಗಿ ಕಾಯುತ್ತಿದ್ದ ವೇಳೆ ಕಾಂಗ್ರೆಸ್‌ನ ಇಬ್ಬರು ನಾಯಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ದೇವೇಂದ್ರ ಸಿಂಗ್ ಯಾದವ್ ಮತ್ತು ಚಂದ್ರು ಕುಂಜಿರ್ ಎಂಬ ನಾಯಕರುಈ ರೀತಿ ಹೊಡೆದಾಡಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಕ್ಷಣವೇ ಅಲ್ಲಿದ್ದ ಪೊಲೀಸ್ ಅಧಿಕಾರಿ ಮತ್ತು ಕಾರ್ಯಕರ್ತರು ಮಧ್ಯ ಪ್ರವೇಶಿಸಿ ಇಬ್ಬರನ್ನೂ ದೂರ ಸರಿಸಿದ್ದಾರೆ.

ಹೊಡೆದಾಟಕ್ಕೆ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ಹೊಡೆದಾಡುವ ಮುನ್ನ ಇಬ್ಬರೂ ವಾಗ್ವಾದಕ್ಕಿಳಿದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.