ADVERTISEMENT

ಕಾಂಗ್ರೆಸ್‌ ತೊರೆದ ಕಪಿಲ್‌ ಸಿಬಲ್‌: ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದ ನಾಯಕರು 

​ಪ್ರಜಾವಾಣಿ ವಾರ್ತೆ
Published 26 ಮೇ 2022, 4:37 IST
Last Updated 26 ಮೇ 2022, 4:37 IST
ಕಪಿಲ್‌ ಸಿಬಲ್‌
ಕಪಿಲ್‌ ಸಿಬಲ್‌   

ಕೊಚ್ಚಿ: ‘ಕಪಿಲ್‌ ಸಿಬಲ್‌ ಅವರು ಪಕ್ಷ ತೊರೆದಿದ್ದರಿಂದ ಯಾವುದೇ ನಷ್ಟವುಂಟಾಗುವುದಿಲ್ಲ. ರಾಷ್ಟ್ರದ ರಾಜಕೀಯದಲ್ಲಿ ಕಾಂಗ್ರೆಸ್‌ ದೊಡ್ಡ ಪಕ್ಷವಾಗಿದೆ. ವಿವಿಧ ರಾಜ್ಯಗಳಲ್ಲಿ ಬೇರೆ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರುವ ಅನೇಕ ನಾಯಕರ ಮೇಲೆ ಇದೇನೂ ಪರಿಣಾಮ ಬೀರುವುದಿಲ್ಲ’ ಎಂದು ಕಾಂಗ್ರೆಸ್‌ ಹೇಳಿದೆ.

‘ಸಿಬಲ್ ಅವರು ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ಸಿದ್ಧಾಂತದ ವಿರುದ್ಧ ಏನನ್ನೂ ಹೇಳಿಲ್ಲ, ಪಕ್ಷದಲ್ಲಿ ಅವಕಾಶ ಕಲ್ಪಿಸಲು ಯಾವುದೇ ಸ್ಥಾನಗಳಿಲ್ಲದ ಕಾರಣ ಸಿಬಲ್ ರಾಜ್ಯಸಭಾ ಸ್ಥಾನಕ್ಕಾಗಿ ಮಾತ್ರ ಕಾಂಗ್ರೆಸ್‌ ತೊರೆದಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.