ADVERTISEMENT

ರಾಜಸ್ಥಾನ ಸರ್ಕಾರ ಅಸ್ಥಿರಗೊಳಿಸುವ ಯತ್ನ: ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು

ಪಿಟಿಐ
Published 10 ಜೂನ್ 2020, 16:14 IST
Last Updated 10 ಜೂನ್ 2020, 16:14 IST
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್   

ಜೈಪುರ: ‘ಕರ್ನಾಟಕ, ಮಧ್ಯಪ್ರದೇಶ ಹಾಗೂ ಗುಜರಾತ್‌ನಂತೆ ರಾಜಸ್ಥಾನದಲ್ಲೂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ರಾಜಸ್ಥಾನ ವಿಧಾನಸಭೆಯ ಮುಖ್ಯ ಸಚೇತಕ ಮಹೇಶ್‌ ಜೋಶಿ ಬುಧವಾರ ಆರೋಪಿಸಿದ್ದಾರೆ.

ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿರುವ ಅವರು, ‘ನಮ್ಮ ಪಕ್ಷದ ಶಾಸಕರು ಹಾಗೂ ನಮಗೆ ಬೆಂಬಲ ನೀಡಿರುವ, ಪಕ್ಷೇತರ ಶಾಸಕರಿಗೆ ಆಮಿಷ ಒಡ್ಡಲಾಗುತ್ತಿದೆ. ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿಯ ಹೆಸರನ್ನು ಉಲ್ಲೇಖಿಸದೆ ಒತ್ತಾಯಿಸಿದ್ದಾರೆ.

ಜೂನ್‌ 19ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಆ ಕಾರಣಕ್ಕಾಗಿಯೇ ಹಟಾತ್ತನೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ ಎನ್ನಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.