ನವದೆಹಲಿ: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿಡಲಾಗಿದೆ.
ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಪುತ್ರರಾಗಿರುವ ಕಾರ್ತಿ ಚಿದಂಬರಂ, ಇತ್ತೀಚೆಗೆ ಅವರೊಂದಿಗೆ ಸಂಪರ್ಕದಲ್ಲಿದ್ದ ಜನರು ವೈದ್ಯಕೀಯ ಶಿಷ್ಟಾಚಾರಗಳನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ.
ಕೋವಿಡ್-19 ಪರೀಕ್ಷೆಯಲ್ಲಿ ನನ್ನ ವರದಿ ಧನಾತ್ಮಕವಾಗಿದೆ. ನನ್ನ ರೋಗಲಕ್ಷಣಗಳು ಸೌಮ್ಯವಾಗಿವೆ. ವೈದ್ಯಕೀಯ ಸಲಹೆಯ ಪ್ರಕಾರ, ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರಿಗೂ ನಾನು ವೈದ್ಯಕೀಯ ಸಲಹೆಗಳನ್ನು ಅನುಸರಿಸಲು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.