ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ ಬೆನ್ನಲ್ಲೇ ಪಕ್ಷದ ಮುಖಂಡ ರಾಹುಲ್ ಗಾಂಧಿ 'ವೆಲ್ ಡನ್' ಎಂದು ಟ್ವೀಟ್ ಮಾಡಿ, ರಾಜ್ಯ ಕಾಂಗ್ರೆಸ್ ತಂಡವನ್ನು ಅಭಿನಂದಿಸಿದ್ದಾರೆ.
'ಬದಲಾವಣೆಯ ಗಾಳಿ ಬೀಸುತ್ತಿದೆ. ಎಂದಿನಂತೆ ಪ್ರಬಲವಾಗಿ ಮುಂದುವರಿಯುತ್ತೇವೆ. ಧನ್ಯವಾದಗಳು ರಾಹುಲ್ ಗಾಂಧಿ ಜೀ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಹಣಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಕರ್ನಾಟಕದ ಜನತೆ ಬಿಜೆಪಿಗೆ ತೋರಿಸಿಕೊಟ್ಟಿದ್ದಾರೆ. ಈ ಫಲಿತಾಂಶವು ಜನ ವಿರೋಧಿಗಳಿಗೆ ಮತ್ತು ಭ್ರಷ್ಟ ಬಿಜೆಪಿಗೆ ತಕ್ಕ ಪಾಠವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ನಲ್ಲಿ ಹೇಳಿದ್ದಾರೆ.
ರಾಜ್ಯದ 5 ನಗರ ಸಭೆಗಳು ಸೇರಿ ಅವಧಿಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 59 ಗ್ರಾಮ ಪಂಚಾಯಿತಿಗಳಿಗೆಸೋಮವಾರನಡೆದ ಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.