ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
(ಚಿತ್ರ ಕೃಪೆ: X/@INCIndia)
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಇಂದು (ಬುಧವಾರ) ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ.
ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, 22 ಅಂಶಗಳ ವಿಭಾಗಗಳಾಗಿ ವಿಂಗಡಿಸಲಾಗಿದೆ.
ಪ್ರಮುಖ ಭರವಸೆಗಳು:
ಅಧಿಕಾರಕ್ಕೆ ಬಂದರೆ ಜಾತಿಗಣತಿ,
ಪೂರ್ವಾಂಚಲದವರಿಗಾಗಿ ಸಚಿವಾಲಯ,
ಮಹಿಳೆಯರಿಗೆ ಮಾಸಿಕ ₹2,500,
300 ಯುನಿಟ್ವರೆಗೆ ಉಚಿತ ವಿದ್ಯುತ್,
₹500ಗೆ ಎಲ್ಪಿಜಿ ಸಿಲಿಂಡರ್,
₹25 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ,
ಉಚಿತ ರೇಷನ್ ಕಿಟ್,
ನಿರುದ್ಯೋಗಿ ವಿದ್ಯಾವಂತ ಯುವಜನತೆಗೆ ಒಂದು ವರ್ಷದವರೆಗೆ ಮಾಸಿಕ ₹8,500,
100 ಇಂದಿರಾ ಕ್ಯಾಂಟೀನ್ (₹5ಗೆ ಊಟ),
ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.