ADVERTISEMENT

ರೈತರ ಆದಾಯ: ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್‌ ಆಗ್ರಹ

ಪಿಟಿಐ
Published 29 ಡಿಸೆಂಬರ್ 2022, 14:48 IST
Last Updated 29 ಡಿಸೆಂಬರ್ 2022, 14:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರೈತರ ಆದಾಯವನ್ನು ದ್ವಿಗುಣ ಮಾಡುವುದಾಗಿ ನೀಡಿರುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್‌, 2004ರ ನಂತರ ರೈತರ ಆದಾಯದ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದೆ.

‘ಬಿಜೆಪಿಯ ಈ ಭರವಸೆಯು ಕಟ್ಟುಕತೆಯಾಗಿದೆ. ಎನ್‌ಡಿಎ ಅಧಿಕಾರಕ್ಕೇರಿದ ಬಳಿಕ ರೈತರ ಆದಾಯ ಕುಸಿದಿದೆ’ ಎಂದು ಅಖಿಲ ಭಾರತ ಕಿಸಾನ್‌ ಕಾಂಗ್ರೆಸ್‌ ಹೇಳಿದೆ.

‘ರೈತರ ಆದಾಯ ದ್ವಿಗುಣಗೊಳಿಸುವುದಾಗಿ 2016ರ ಫೆಬ್ರುವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದರು. ಹಣದುಬ್ಬರವನ್ನು ಗಣನೆಗೆ ತೆಗೆದುಕೊಂಡರೆ ಕೆಲ ವರ್ಷಗಳಿಂದ ರೈತರ ಆದಾಯ ಕುಸಿಯುತ್ತಿದೆ’ ಎಂದು ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸುಖಪಾಲ್ ಸಿಂಗ್ ಖೈರಾ ತಿಳಿಸಿದ್ದಾರೆ.

ADVERTISEMENT

2004ರಿಂದ 2014ರ ನಡುವೆ ಹೋಲಿಕೆ ಮಾಡಿ ನೋಡಿದರೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ಆದಾಯ ದ್ವಿಗುಣಗೊಂಡಿತ್ತು ಎಂದು 2018ರ ರಾಷ್ಟ್ರೀಯ ಮಾದರಿ ಸಮೀಕ್ಷೆಯನ್ನು ಉಲ್ಲೇಖಿಸಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.