ಪಟ್ನಾ (ಪಿಟಿಐ): ‘ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರದ ಸಂಪುಟದಲ್ಲಿ ಕಾಂಗ್ರೆಸ್ನ ಮೂವರಿಗೆ ಸಚಿವ ಸ್ಥಾನ ದೊರೆಯಲಿದೆ’ ಎಂದು ಎಐಸಿಸಿ ಬಿಹಾರ ಉಸ್ತುವಾರಿ ಭಕ್ತಚರಣ್ ದಾಸ್ ಅವರು ಭಾನುವಾರ ಹೇಳಿದ್ದಾರೆ.
‘ಆಗಸ್ಟ್ 16ರಂದು ಪಕ್ಷದ ಇಬ್ಬರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಪಕ್ಷದ ಮತ್ತೊಬ್ಬ ಶಾಸಕರಿಗೆ ಸಚಿವ ಸ್ಥಾನ ದೊರೆಯಲಿದೆ’ ಎಂದು ಅವರು ತಿಳಿಸಿದ್ದಾರೆ.
‘ಮಹಾಘಟಬಂಧನ ಸರ್ಕಾರದಲ್ಲಿ ಕಾಂಗ್ರೆಸ್ಗೆ ಎಷ್ಟು ಸಚಿವ ಸ್ಥಾನ ದೊರೆಯಲಿದೆ ಎಂಬುದು ಈಗಾಗಲೇ ಅಂತಿಮಗೊಂಡಿದೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಪಕ್ಷದ ಶಾಸಕರು ಯಾರು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಸೋಮವಾರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.
ಮಹಾಘಟಬಂಧನ ಸರ್ಕಾರದಲ್ಲಿ ಕಾಂಗ್ರೆಸ್ನ ನಾಲ್ವರು ಶಾಸಕರಿಗೆ ಸಚಿವ ಸ್ಥಾನ ದೊರೆಯಲಿದೆ ಎಂದು ಪಕ್ಷದ ಮೂಲಗಳು ಈ ಹಿಂದೆ ತಿಳಿಸಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.