ಬೆಂಗಳೂರು: ಕ್ರೀಡೆ, ಸ್ಪರ್ಧೆ ಹಾಗೂ ಹೋರಾಟದ ಬಗ್ಗೆ ರಾಹುಲ್ ಗಾಂಧಿ ಅವರಭಾಷಣದ ವಿಡಿಯೊವನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕಾಂಗ್ರೆಸ್ ಹಂಚಿಕೊಂಡಿರುವ ವಿಡಿಯೊದಲ್ಲಿ ರಾಹುಲ್ ಗಾಂಧಿ ಅವರು, 'ನೀವು ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿದ್ದಾಗ ಮೊದಲು ನಿಮ್ಮೊಳಗಿರುವ ಭಯದ ವಿರುದ್ಧ ಹೋರಾಡುತ್ತೀರಿ. ನಿಮ್ಮೊಳಗಿರುವ ಭಯದ ಅನುಭವವನ್ನು ಚೆನ್ನಾಗಿ ತಿಳಿಯಲು ಕ್ರೀಡೆ ನಿಜವಾಗಿಯೂ ಅತ್ಯುತ್ತಮ ವೇದಿಕೆಯಾಗಿದೆ' ಎಂದಿದ್ದಾರೆ.
ಕೇರಳ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಮಲಪ್ಪುರಂನ ಎರ್ನಾಡ್ನಲ್ಲಿರುವ 'ಸುಲ್ಲಮುಸ್ಸಲಮ್ ಆರ್ಟ್ಸ್ ಆ್ಯಂಡ್ ಸೈನ್ಸ್ ಕಾಲೇಜ್'ನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದರು.
ಐದು ರಾಜ್ಯಗಳ ಚುನಾವಣೆ ಫಲಿತಾಂಶವು ಕಾಂಗ್ರೆಸ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದತ್ತ ದಾಪುಗಾಲು ಹಾಕಿದ್ದರೆ, ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷವು ಭಾರಿ ಮುನ್ನಡೆ ಸಾಧಿಸಿದೆ.
Assembly Poll Results Live | ಪಂಚರಾಜ್ಯ ಚುನಾವಣೆ ಫಲಿತಾಂಶ: ಉತ್ತರಾಖಂಡದ ಹಾಲಿ, ಮಾಜಿ ಮುಖ್ಯಮಂತ್ರಿಗಳಿಗೆ ಹಿನ್ನಡೆ Live
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.