ADVERTISEMENT

ಹುತಾತ್ಮರಿಗೆ ಶ್ರದ್ಧಾಂಜಲಿ: ಕಾಂಗ್ರೆಸ್ ನಾಯಕನನ್ನು ಸ್ವಾಗತಿಸಲು ನೋಟು ಎಸೆದರು!

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2019, 9:39 IST
Last Updated 23 ಫೆಬ್ರುವರಿ 2019, 9:39 IST
   

ನವದೆಹಲಿ: ಪುಲ್ವಾಮ ಉಗ್ರ ದಾಳಿಯಲ್ಲಿ ಮಡಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಪುತ್ರ ವಿರೇಂದ್ರ ರಾವತ್ ಅವರ ಮೈ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ನೋಟು ಎಸೆಯುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿರೇಂದ್ರ ರಾವತ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಅವರ ಮೇಲೆ ನೋಟುಗಳನ್ನ ಎಸೆಯುತ್ತಿದ್ದಾರೆ.ಇತ್ತ ಇಬ್ಬರು ಗಾಯಕರು ಭಜನೆ ಹಾಡುತ್ತಿರುವುದು ವಿಡಿಯೊದಲ್ಲಿದೆ. ಉತ್ತರಾಖಂಡದ ರೂರ್ಕಿಯಲ್ಲಿ ಆ ಘಟನೆ ನಡೆದಿದೆ.

ಇತ್ತೀಚೆಗೆ ಹುತಾತ್ಮಯೋಧನ ಅಂತಿಮ ಯಾತ್ರೆ ವೇಳೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ನಗುತ್ತಾ ಕೈ ಬೀಸಿದ್ದು ಟೀಕೆಗೊಳಗಾಗಿತ್ತು.ಕೇರಳದಲ್ಲಿ ಹುತಾತ್ಮ ಯೋಧನ ಪಾರ್ಥೀವ ಶರೀರದ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿದ್ದೂ ವಿವಾದವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.