ADVERTISEMENT

ಲಖನೌದಲ್ಲಿ ಮಸೀದಿ, ಡಿಸೆಂಬರ್‌ನಲ್ಲಿ ರಾಮಮಂದಿರ ನಿರ್ಮಾಣ: ರಾಮಜನ್ಮಭೂಮಿ ನ್ಯಾಸ್

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2018, 12:45 IST
Last Updated 3 ನವೆಂಬರ್ 2018, 12:45 IST
ಕೃಪೆ: ಎಎನ್ಐ
ಕೃಪೆ: ಎಎನ್ಐ   

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ ಎಂದು ರಾಮಜನ್ಮಭೂಮಿ ನ್ಯಾಸ್ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ.

ರಾಮಜನ್ಮಭೂಮಿ ವಿವಾದದಲ್ಲಿ ವಾದಿಸುತ್ತಿರುವ ಎರಡು ಗುಂಪಿನ ಜನರ ಸಮ್ಮತಿಯಿಂದಲೇ ರಾಮಮಂದಿರ ನಿರ್ಮಾಣ ನಡೆಯಲಿದೆ. ಅದೇ ವೇಳೆ ಲಖನೌದಲ್ಲಿ ಮಸೀದಿಯನ್ನೂ ನಿರ್ಮಿಸಲಾಗುವುದು.ದೇವಾಲಯ ಮತ್ತು ಮಸೀದಿಯ ನಿರ್ಮಾಣಕ್ಕೆ ಸುಗ್ರೀವಾಜ್ಞೆಯ ಅಗತ್ಯವಿಲ್ಲ ಎಂದು ಬಿಜೆಪಿಯ ಮಾಜಿ ಸಂಸದ ವೇದಾಂತಿ ಹೇಳಿದ್ದಾರೆ.

ರಾಮಮಂದಿರ ನಿರ್ಮಾಣ ಕಾರ್ಯಗಳು ಮತ್ತಷ್ಟು ವಿಳಂಬವಾದರೆ 1992ರಲ್ಲಿ ನಡೆದ ಜನಾಂದೋಲನದಂತೆಮತ್ತೊಂದು ಜನಾದೋಲನ ನಡೆಸಲಾಗುವುದು ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಭಯ್ಯಾಜಿ ಜೋಷಿ ಹೇಳಿದ್ದರು.

ADVERTISEMENT

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.