ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಶೇ 84ರಷ್ಟು ಸಾವಿನ ಪ್ರಕರಣಗಳು ಹತ್ತು ರಾಜ್ಯಗಳಿಂದ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಈ ವರೆಗೂ ಭಾರತದಲ್ಲಿ ಒಟ್ಟು 50 ಲಕ್ಷಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ ಹನ್ನೊಂದು ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಸೋಂಕಿನಿಂದ ಮುಕ್ತರಾಗಿದ್ದಾರೆ.
ಸಕ್ರಿಯ ಪ್ರಕರಣಗಳಿಂತ ಚೇತರಿಸಿಕೊಂಡಿರುವ ಪ್ರಕರಣಗಳು 5 ಪಟ್ಟು ಹೆಚ್ಚಿದೆ. ದೇಶದಲ್ಲಿ ಒಟ್ಟು ಚೇತರಿಸಿಕೊಂಡವರ ಪ್ರಮಾಣ ಶೇ 82.58ಕ್ಕೆ ಏರಿದೆ.
ಮಹಾರಾಷ್ಟ್ರದಲ್ಲಿ 11,921 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ 180 ಮೃತಪಟ್ಟಿದ್ದಾರೆ.
ಕರ್ನಾಟಕದಲ್ಲಿ 6, 892 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 59 ಜನರು ಸಾವಿಗೀಡಾಗಿದ್ದಾರೆ.
ದೆಹಲಿಯಲ್ಲಿ ಹೊಸದಾಗಿ 37 ಜನರು ಮೃತಪಟ್ಟಿದ್ದಾದ್ದು 1,984 ಹೊಸ ಪ್ರಕರಣಗಳು ವರದಿಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.