ADVERTISEMENT

ಕೋವಿಡ್ ಸವಾಲು: ವಿಪಕ್ಷದ ನಾಯಕರು, ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮೋದಿ ಚರ್ಚೆ 

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 12:32 IST
Last Updated 5 ಏಪ್ರಿಲ್ 2020, 12:32 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಕೋವಿಡ್ -19 ರೋಗ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಈ ಸವಾಲನ್ನು ಎದುರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ನಾಯಕರ ಜತೆ ಚರ್ಚೆ ನಡೆಸಿದ್ದಾರೆ.

ಕೋವಿಡ್-19 ಸವಾಲಿನ ಬಗ್ಗೆ ಕೆಲವು ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಮೋದಿಯವರಿಗೆ ಪತ್ರ ಬರೆದಿದ್ದರು. ಸೋನಿಯಾ ಗಾಂಧಿ ಸೇರಿದಂತೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರತಿಭಾ ಪಾಟೀಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ದೇವೇಗೌಡರ ಜತೆ ಮೋದಿ ಕೋವಿಡ್-19 ಬಗ್ಗೆ ಚರ್ಚೆ ಮಾಡಿದ್ದಾರೆ.

ಅದೇ ವೇಳೆ ಉತ್ತರ ಮತ್ತು ದಕ್ಷಿಣ ಭಾರತದ ರಾಜಕೀಯ ನಾಯಕರೊಂದಿಗೂ ಪ್ರಧಾನಿಚರ್ಚೆ ನಡೆಸಿದ್ದಾರೆ.

ADVERTISEMENT

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಅಖಿಲೇಶ್ ಸಿಂಗ್ ಯಾದವ್ ಪಂಜಾಬ್‌ನ ಪ್ರಕಾಶ್ ಸಿಂಗ್ ಬಾದಲ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾದ ನವೀನ್ ಪಟ್ನಾಯಿಕ್, ತೆಲಂಗಾಣದ ಕೆ.ಚಂದ್ರಶೇಖರ್ ರಾವ್ ಮತ್ತು ಡಿಎಂಕೆ ನಾಯಕ ಎಂ,ಕೆ ಸ್ಟಾಲಿನ್ ಜತೆ ಮೋದಿ ಮಾತುಕತೆ ನಡೆಸಿದ್ದಾರೆ.

ದೇಶದಲ್ಲಿ ಕೋವಿಡ್-19 ರೋಗ ನಿಯಂತ್ರಣಕ್ಕಾಗಿ ಸರ್ಕಾರ ವಿಪಕ್ಷಗಳ ಮಾತು ಆಲಿಸಿಲ್ಲ ಎಂಬ ಆಕ್ಷೇಪವೂ ಮೋದಿ ಸರ್ಕಾರದ ಮೇಲಿದೆ. ಈ ಹಿನ್ನಲೆಯಲ್ಲಿ ಹಿರಿಯ ರಾಜಕಾರಣಿಗಳ ಜತೆ ಮೋದಿ ಮಾತುಕತೆ ಕೋವಿಡ್-19 ವಿರುದ್ಧದ ಹೋರಾಟಕ್ಕೆ ಬಲ ತುಂಬಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.