ನವದೆಹಲಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ವಿಮಾನ ಹಾರಿದ್ದ ಪ್ರಕರಣಕ್ಕೆ ಸಂಬಂಧಿಸಿ, ‘ಗೋ ಫಸ್ಟ್’ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ಶುಕ್ರವಾರ ₹ 10 ಲಕ್ಷ ದಂಡ ವಿಧಿಸಿದೆ.
ಘಟನೆ ಸಂಬಂಧ ಜ.10ರಂದು ಗೋ ಫಸ್ಟ್ ವಿಮಾನ ಯಾನ ಸಂಸ್ಥೆಯ ಅಕೌಂಟೆಬಲ್ ಮ್ಯಾನೇಜರ್ಗೆ ಶೋಕಾಸ್ ನೀಡಲಾಗಿತ್ತು. ಜ. 25ರಂದು ವಿಮಾನಯಾನ ಸಂಸ್ಥೆಯು ವರದಿ ಸಲ್ಲಿಸಿತ್ತು. ವರದಿಯನ್ನು ಪರಿಶೀಲಿಸಿದ ನಂತರ ದಂಡ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಡಿಜಿಸಿಎ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.