ADVERTISEMENT

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್‌ ದೇಶ್‌ಮುಖ್‌ ಜಾಮೀನು ಅರ್ಜಿ ತಿರಸ್ಕಾರ

ಪಿಟಿಐ
Published 18 ಜನವರಿ 2022, 13:25 IST
Last Updated 18 ಜನವರಿ 2022, 13:25 IST
ಅನಿಲ್‌ ದೇಶ್‌ಮುಖ್‌
ಅನಿಲ್‌ ದೇಶ್‌ಮುಖ್‌   

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿತ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿಯ ವಿಶೇಷ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

ಎನ್‌ಸಿಪಿ ಮುಖಂಡರಾಗಿರುವ ದೇಶ್‌ಮುಖ್‌ ಅವರನ್ನು ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಕಳೆದ ವರ್ಷ ನವೆಂಬರ್‌ 2 ರಂದು ಬಂಧಿಸಿತ್ತು. ಈಗ ಅವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಅಕ್ರಮ ಹಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯವು ತನಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲು ಇಡಿ ಸಲ್ಲಿಸಿದ ದೋಷಾರೋಪ ಪಟ್ಟಿಯನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಆದರೆ ವಿಶೇಷ ನ್ಯಾಯಾಧೀಶ ಆರ್‌.ಎನ್‌.ರೋಕಡೆ ದೇಶ್‌ಮುಖ್‌ ಮನವಿಯನ್ನು ತಳ್ಳಿ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.