ADVERTISEMENT

ಮಾಲೇಗಾಂವ್ ಸ್ಫೋಟ: ವಿಚಾರಣೆಗೆ ಹಾಜರಾಗಲು ಸಂಸದೆ ಪ್ರಜ್ಞಾಗೆ ಎನ್‌ಐಎ ಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 14:39 IST
Last Updated 3 ಜೂನ್ 2019, 14:39 IST
   

ನವದೆಹಲಿ: ಮಾಲೇಗಾಂವ್ ಸ್ಫೋಟ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ಗೆ ಆದೇಶ ನೀಡಿದೆ. ಸಂಸತ್ ಕಲಾಪಗಳಲ್ಲಿ ಭಾಗವಹಿಸಬೇಕಾಗಿರುವುದರಿಂದ ಜೂನ್ 3 ಮತ್ತು 7ರಂದು ನಡೆಯುವ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆ ವಿಷಯದಲ್ಲಿ ನನಗೆ ವಿನಾಯಿತಿ ನೀಡಬೇಕು ಎಂದು ಸಾಧ್ವಿ ಪ್ರಜ್ಞಾ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು ವಿಚಾರಣೆಗೆ ಹಾಜರಾಗಲು ಆದೇಶಿಸಿದೆ.

ಮಾಲೇಗಾಂವ್ ಸ್ಫೋಟದ ಆರೋಪಿಯಾಗಿರುವ ಪ್ರಜ್ಞಾ ಸಿಂಗ್ ಠಾಕೂರ್ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.