ನವದೆಹಲಿ: ದೇಶದಲ್ಲಿ ಕೋವಿಡ್ ರೋಗದಿಂದ ಸಾವಿಗೀಡಾದವರ ಸಂಖ್ಯೆ 100 ದಾಟಿದೆ.ಒಟ್ಟು 4067 ಸೋಂಕು ಪ್ರಕರಣಗಳು ವರದಿಯಾಗಿದ್ದು, 291 ಮಂದಿ ಗುಣಮುಖರಾಗಿದ್ದಾರೆ.
ಜಗತ್ತಿನಾದ್ಯಂತ ಕೋವಿಡ್ ರೋಗಕ್ಕೆ ಬಲಿಯಾದವರ ಸಂಖ್ಯೆ 70,000ಕ್ಕೆ ತಲುಪಿದೆ. ಸುಮಾರು 1.2 ದಶಲಕ್ಷ ಜನರಿಗೆ ಸೋಂಕು ತಗುಲಿದೆ.
ಉತ್ತರ ಪ್ರದೇಶದಲ್ಲಿ ಏಪ್ರಿಲ್ 3ರಂದು ಸಾವಿಗೀಡಾದ 55ರ ಹರೆಯದ ವ್ಯಕ್ತಿಗೆ ಕೊರೊನಾ ಸೋಂಕು ಇತ್ತು ಎಂದು ತಿಳಿದುಬಂದಿದೆ.ಇದೀಗ ಕೋವಿಡ್ನಿಂದಾಗಿ ಉತ್ತರ ಪ್ರದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೇರಿದೆ. ಮೃತ ವ್ಯಕ್ತಿಯ ಕುಟುಂಬದ 10 ಸದಸ್ಯರನ್ನು ಕ್ವಾರಂಟೈನ್ನಲ್ಲಿರಿಸಲಾಗಿದೆ.
ರಾಜಸ್ಥಾನದಲ್ಲಿ 8 ಮಂದಿಗೆ ಕೋವಿಡ್ ರೋಗ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 274 ಆಗಿದೆ. ಜುನ್ಜುನ್-5, ದುಂಗರ್ಪುರ್ -2 ಮತ್ತು ಕೋಟಾದಲ್ಲಿನ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಹೇಳಿದೆ.
ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ 52 ಹರೆಯದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದು, ಕೋವಿಡ್ಗೆ ಬಲಿಯಾದವರ ಸಂಖ್ಯೆ 14 ಆಗಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ರಾಜ್ಯದ ರಾಜಧಾನಿಯಲ್ಲಿ ಕೋವಿಡ್ಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.