ಮುಂಬೈ:ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಶನಿವಾರ ರಾತ್ರಿ 11.30ಕ್ಕೆ ಸರ್ ಎಚ್.ಎನ್. ರಿಲಯನ್ಸ್ ಫೌಂಡೇಷನ್ ಹಾಸ್ಪಿಟಲ್ ಅಂಡ್ ರಿಸರ್ಚ್ ಸೆಂಟರ್ನಲ್ಲಿ ಇವರು ಅಸುನೀಗಿದ್ದಾರೆ.
ಅದೇ ವೇಳೆ ಬಿಹಾರದಲ್ಲಿ 38ರ ಹರೆಯದ ವ್ಯಕ್ತಿಯೊಬ್ಬರು ಕಿಡ್ನಿ ವೈಫಲ್ಯದಿಂದ ಸಾವಿಗೀಡಾಗಿದ್ದಾರೆ. ಇವರಿಗೆ ಕೋವಿಡ್ -19 ಸೋಂಕು ಇರುವುದು ಪತ್ತೆಯಾಗಿತ್ತು. ಮುಂಗೇರ್ ನಿವಾಸಿಯಾದ ಇವರು ಶನಿವಾರ ಪಟನಾದ ಏಮ್ಸ್ನಲ್ಲಿ ಕೊನೆಯುಸಿರೆಳೆದಿದ್ದಾರೆ. 2 ದಿನಗಳ ಹಿಂದೆ ಇವರು ಕೋಲ್ಕತ್ತದಿಂದ ವಾಪಸ್ ಆಗಿದ್ದರು ಎಂದು ಏಮ್ಸ್ ವೈದ್ಯ ಡಾ. ಪ್ರಭಾತ್ ಕುಮಾರ್ ಸಿಂಗ್ ಹೇಳಿದ್ದಾರೆ.
ಇದೀಗ ಕೋವಿಡ್-19 ಸೋಂಕಿನಿಂದಾಗಿ ಮಹಾರಾಷ್ಟ್ರದಲ್ಲಿ ಸಾವಿಗೀಡಾದವರ ಸಂಖ್ಯೆ 2 ಆಗಿದ್ದು, ಭಾರತದಲ್ಲಿ ಸಾವಿಗೀಡಾದವರಸಂಖ್ಯೆ 6ಕ್ಕೆ ಏರಿದೆ.
ಮುಂಬೈನಲ್ಲಿ 6 ಮಂದಿಗೆ ಮತ್ತು ಪುಣೆಯಲ್ಲಿ 4 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಮಹಾರಾಷ್ಟ್ರದಲ್ಲಿ ರೋಗಿಗಳ ಸಂಖ್ಯೆ 74ಕ್ಕೆ ಏರಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಇಲಾಖೆ ಟ್ವೀಟ್ ಮಾಡಿದೆ..
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.