ನವದೆಹಲಿ: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದಕ್ಷಿಣ ದೆಹಲಿಯ ಲಜಪತ್ ನಗರ ಮಾರುಕಟ್ಟೆಯನ್ನು ಮುಂದಿನ ಆದೇಶದವರೆಗೆ ಮತ್ತು ರುಯಿ ಮಂಡಿಯನ್ನು ಜುಲೈ 6ರ ತನಕ ಮುಚ್ಚುವಂತೆ ದೆಹಲಿ ಸರ್ಕಾರವು ಸೂಚಿಸಿದೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು(ಡಿಡಿಎಂಎ) ಭಾನುವಾರ ಈ ಆದೇಶವನ್ನು ಹೊರಡಿಸಿದೆ.
ಮಾರುಕಟ್ಟೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿರುವ ಕಾರಣ ಮುಂದಿನ ಆದೇಶ ಬರುವವರಿಗೆ ಲಜಪತ್ ನಗರ ಮಾರುಕಟ್ಟೆಯನ್ನು ಮುಚ್ಚುವಂತೆ ಸೂಚಿಸಲಾಗಿದೆ’ ಎಂದು ಪ್ರಾಧಿಕಾರ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.