ADVERTISEMENT

ಸರಳವಾಗಿ ಗಣೇಶೋತ್ಸವ ಆಚರಿಸಲು ಉದ್ಧವ್‌ ಕರೆ

ಪಿಟಿಐ
Published 18 ಜೂನ್ 2020, 16:12 IST
Last Updated 18 ಜೂನ್ 2020, 16:12 IST
ಗಣೇಶ ಮೂರ್ತಿ ಅಂತಿಮ ಸಿದ್ಧತೆಯಲ್ಲಿರುವ ಕಲಾವಿದ–ಸಾಂದರ್ಭಿಕ ಚಿತ್ರ
ಗಣೇಶ ಮೂರ್ತಿ ಅಂತಿಮ ಸಿದ್ಧತೆಯಲ್ಲಿರುವ ಕಲಾವಿದ–ಸಾಂದರ್ಭಿಕ ಚಿತ್ರ   

ಮುಂಬೈ: ಕೋವಿಡ್‌–19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ವರ್ಷ ಗಣೇಶೋತ್ಸವವನ್ನು ಸರಳವಾಗಿ ಆಚರಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಗುರುವಾರ ಕರೆ ನೀಡಿದ್ದಾರೆ.

ಗಣೇಶೋತ್ಸವ ಮಂಡಳಿ ಪದಾಧಿಕಾರಿಗಳ ಜತೆಗೆ ವಿಡಿಯೊ ಸಂವಾದ ನಡೆಸಿದ ಠಾಕ್ರೆ ಅವರು, ಸಾಮಾಜಿಕ ಜವಾಬ್ದಾರಿಗಳನ್ನು ಅರಿತು ಸರಳವಾಗಿ ಹಬ್ಬ ಆಚರಿಸುವಂತೆ ಸೂಚಿಸಿದ್ದಾರೆ.

ಕೊರೊನಾ ವೈರಸ್‌ ಸೋಂಕು ಹರಡುವ ಭೀತಿ ಇನ್ನೂ ದೂರವಾಗಿಲ್ಲ. ಈ ಕಾರಣಕ್ಕೆ ಹಿಂದಿನ ವರ್ಷಗಳಂತೆ ಈ ಬಾರಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲು ಸಾಧ್ಯವಿಲ್ಲ. ಹಬ್ಬದ ಸಂದರ್ಭದಲ್ಲಿ ಮೆರವಣಿಗೆ ಅಥವಾ ಜನಸಂದಣಿ ಇರಬಾರದು ಎಂದಿದ್ದಾರೆ.

ADVERTISEMENT

ಈ ಬಾರಿ ಆಗಸ್ಟ್‌ 22ರಂದು ಗಣೇಶೋತ್ಸವ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.