ADVERTISEMENT

‘ಉತ್ತರ ಪ್ರದೇಶದಲ್ಲಿ ಕೊರೊನಾಕ್ಕಿಂತ ಅಪರಾಧದ ವೈರಸ್‌ ಹೆಚ್ಚು ಸಕ್ರಿಯವಾಗಿದೆ‘

ಪಿಟಿಐ
Published 22 ಜುಲೈ 2020, 8:26 IST
Last Updated 22 ಜುಲೈ 2020, 8:26 IST
ಮಾಯಾವತಿ
ಮಾಯಾವತಿ   

ಲಖನೌ: ಉತ್ತರ ಪ್ರದೇಶದಲ್ಲಿ ಕೊರೊನಾ ವೈರಸ್‌ಗಿಂತ ಅಪರಾಧದ ವೈರಾಣು ಹೆಚ್ಚು ಸಕ್ರಿಯವಾಗಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ.

‘ಕೊಲೆ ಮತ್ತು ಮಹಿಳೆಯರ ವಿರುದ್ಧದ ಭೀಕರ ಅಪರಾಧಗಳು ನಿರಂತರವಾಗಿ ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಗಿಂತ ಜಂಗಲ್‌ರಾಜ್ ‌(ಅಪರಾಧ) ಅಟ್ಟಹಾಸ ಮೆರೆಯುತ್ತಿದೆ. ಇದು ಜನರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕು’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಆದರೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಹಲ್ಲೆಕೋರರು ಗಾಜಿಯಾಬಾದ್‌ ಮೂಲದ ಪತ್ರಕರ್ತ ವಿಕ್ರಂ ಜೋಶಿ ಮೇಲೆ ಗುಂಡು ಹಾರಿಸಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಗ್ಗೆ ಅವರು ಮೃತಪಟ್ಟರು. ಇದರ ಬೆನ್ನಲ್ಲೇಮಾಯಾವತಿ ಅವರು ಈ ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.