ADVERTISEMENT

ಕೋವಿಡ್‌: ಗಣರಾಜ್ಯೋತ್ಸವ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ಶಶಿ ತರೂರ್ ಸಲಹೆ

ಪಿಟಿಐ
Published 6 ಜನವರಿ 2021, 9:09 IST
Last Updated 6 ಜನವರಿ 2021, 9:09 IST
ಶಶಿ ತರೂರ್
ಶಶಿ ತರೂರ್   

ನವದೆಹಲಿ: ಕೋವಿಡ್‌ ಪ್ರಸರಣವನ್ನು ನಿಯಂತ್ರಿಸಲು ಗಣರಾಜ್ಯೋತ್ಸವ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಕಾಂಗ್ರೆಸ್‌ ನಾಯಕ ಶಶಿ ತರೂರ್ ಸಲಹೆ ನೀಡಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾಗಿತ್ತು. ಆದರೆ ಬ್ರಿಟನ್‌ನಲ್ಲಿರೂಪಾಂತರಗೊಂಡ ಕೊರೊನಾ ವೈರಸ್‌ ತೀವ್ರವಾಗಿ ಹರಡುತ್ತಿರುವ ಕಾರಣ ಬೋರಿಸ್‌ ಅವರು ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾರೆ.

ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಶಶಿ ತರೂರ್‌ ಅವರು,‘ ಕೋವಿಡ್‌ನ ಎರಡನೇ ಅಲೆಯಿಂದಾಗಿ ಬ್ರಿಟನ್‌ ಪ್ರಧಾನಿ ಅವರು ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಇದರಿಂದಾಗಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳೇ ಇಲ್ಲ. ಹೀಗಿರುವಾಗ ಗಣರಾಜ್ಯೋತ್ಸವ ಕಾರ್ಯಕ್ರಮಗಳನ್ನು ರದ್ದುಗೊಳಿಸಬಾರದೇ’ ಎಂದು ಅವರು ಕೇಳಿದ್ದಾರೆ.

ADVERTISEMENT

‘ಎಂದಿನಂತೆ ಪರೇಡ್‌ ಅನ್ನು ಹುರಿದುಂಬಿಸಲು ಜನ ಸಮೂಹವನ್ನು ಸೇರಿಸುವುದು ಬೇಜವಾಬ್ದಾರಿಯಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.