ರಾಯಪುರ: ಛತ್ತೀಸ್ಗಡದ ಬಿಜಾಪುರ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ನಾಲ್ವರು ಯೋಧರನ್ನು ನಕ್ಸಲರು ನೆಲಬಾಂಬ್ ಸ್ಫೋಟಿಸಿ ಹತ್ಯೆ ಮಾಡಿದ್ದಾರೆ.
ಇಲ್ಲಿನ ಮುರ್ದಾಂಡದಲ್ಲಿನ ಸಿಆರ್ಪಿಎಫ್ ಶಿಬಿರದ ಬಳಿ ಶನಿವಾರ ಸಂಜೆ ವಾಹನದಲ್ಲಿ ಆರು ಯೋಧರು ಹೊರಟಿದ್ದರು. ಈ ವೇಳೆ ನೆಲಬಾಂಬ್ ಸ್ಫೋಟಗೊಂಡು ನಾಲ್ವರು ಮೃತರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ರಮಣ್ ಸಿಂಗ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ದಿನವೇ ನಕ್ಸಲರು ಈ ಕೃತ್ಯ ಎಸಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.