ADVERTISEMENT

ಸಿಆರ್‌ಪಿಎಫ್‌ ಯೋಧರ ಹತ್ಯೆ

ಪಿಟಿಐ
Published 27 ಅಕ್ಟೋಬರ್ 2018, 20:15 IST
Last Updated 27 ಅಕ್ಟೋಬರ್ 2018, 20:15 IST
ನಕ್ಸಲರು ನೆಲಬಾಂಬ್‌ ಸ್ಫೋಟಿಸಿರುವುದು. ಚಿತ್ರ: ಪಿಟಿಐ
ನಕ್ಸಲರು ನೆಲಬಾಂಬ್‌ ಸ್ಫೋಟಿಸಿರುವುದು. ಚಿತ್ರ: ಪಿಟಿಐ   

ರಾಯಪುರ: ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ನಾಲ್ವರು ಯೋಧರನ್ನು ನಕ್ಸಲರು ನೆಲಬಾಂಬ್‌ ಸ್ಫೋಟಿಸಿ ಹತ್ಯೆ ಮಾಡಿದ್ದಾರೆ.

ಇಲ್ಲಿನ ಮುರ್ದಾಂಡದಲ್ಲಿನ ಸಿಆರ್‌ಪಿಎಫ್‌ ಶಿಬಿರದ ಬಳಿ ಶನಿವಾರ ಸಂಜೆ ವಾಹನದಲ್ಲಿ ಆರು ಯೋಧರು ಹೊರಟಿದ್ದರು. ಈ ವೇಳೆ ನೆಲಬಾಂಬ್‌ ಸ್ಫೋಟಗೊಂಡು ನಾಲ್ವರು ಮೃತರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ರಮಣ್‌ ಸಿಂಗ್‌ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ದಿನವೇ ನಕ್ಸಲರು ಈ ಕೃತ್ಯ ಎಸಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT