ADVERTISEMENT

ನಕ್ಸಲಿಸಂ ವಿರುದ್ಧ ಸಿಆರ್‌ಪಿಎಫ್ ಯೋಧರ ಕಾರ್ಯ ಶ್ಲಾಘನೀಯ: ಅಮಿತ್‌ ಶಾ

ಪಿಟಿಐ
Published 25 ಡಿಸೆಂಬರ್ 2024, 9:54 IST
Last Updated 25 ಡಿಸೆಂಬರ್ 2024, 9:54 IST
<div class="paragraphs"><p> ಕೇಂದ್ರ ಗೃಹ ಸಚಿವ ಅಮಿತ್‌&nbsp; ಶಾ </p></div>

ಕೇಂದ್ರ ಗೃಹ ಸಚಿವ ಅಮಿತ್‌  ಶಾ

   

–ಪಿಟಿಐ ಚಿತ್ರ

ನವದೆಹಲಿ: ಈಶಾನ್ಯ ರಾಜ್ಯಗಳು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಕ್ಸಲಿಸಂ ಅನ್ನು ಎದುರಿಸುವಲ್ಲಿ ಹಾಗೂ ಶಾಂತಿ ಮರು ಸ್ಥಾಪಿಸುವಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರ ಕಾರ್ಯ ಶ್ಲಾಘನೀಯವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬುಧವಾರ ಹೇಳಿದ್ದಾರೆ.

ADVERTISEMENT

ಸಿಆರ್‌ಪಿಎಫ್ ಪ್ರಧಾನ ಕಚೇರಿ ಅಮಿತ್‌ ಶಾ ಅವರು ಭೇಟಿ ನೀಡಿ, ವಿಶ್ವದ ಅತಿದೊಡ್ಡ ಅರೆಸೇನಾ ಪಡೆಯ ಕಾರ್ಯಾಚರಣೆಗಳು ಮತ್ತು ಆಡಳಿತಾತ್ಮಕ ದಕ್ಷತೆ ಕುರಿತು ಪರಿಶೀಲನೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಸಿಆರ್‌ಪಿಎಫ್ ಮುಖ್ಯಸ್ಥರು ಶಾ ಅವರಿಗೆ ಸರ್ಕಾರದಿಂದ ಸಿಗುವ ವಿವಿಧ ಯೋಜನೆಗಳು ಸೇರಿದಂತೆ ಮೃತ ಯೋಧರ ಕುಟುಂಬಕ್ಕೆ ಸರ್ಕಾರ ಒದಗಿಸುವ ಯೋಜನೆಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ದೇಶದ ಆಂತರಿಕ ಭದ್ರತೆ ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸಿಆರ್‌ಪಿಎಫ್ ಯೋಧರ ಪಾತ್ರ ಪ್ರಮುಖವಾದದ್ದು ಎಂದು ಶಾ ತಿಳಿಸಿದ್ದಾರೆ.

ಯೋಧರು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕೆಂದು ಸಲಹೆ ನೀಡಿದ ಶಾ, ರಾಗಿ ಬಳಕೆಗೆ ಒತ್ತು ನೀಡಿದ್ದಾರೆ. ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ‘ಪ್ರಕೃತಿ ಪರೀಕ್ಷಾ ಅಭಿಯಾನ'ದಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.