ADVERTISEMENT

ಐಇಡಿ ಸ್ಫೋಟ: ಸಿಆರ್‌ಪಿಎಫ್‌ ಯೋಧ ಹುತಾತ್ಮ

​ಪ್ರಜಾವಾಣಿ ವಾರ್ತೆ
Published 31 ಜುಲೈ 2019, 18:52 IST
Last Updated 31 ಜುಲೈ 2019, 18:52 IST
   

ರಾಯಪುರ: ಛತ್ತೀಸಗಡದ ಬಸ್ತಾರ್ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಸಿಆರ್‌ಪಿಎಫ್‌ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಬಿಹಾರದ ನಳಂದಾ ಜಿಲ್ಲೆಯ ನಿವಾಸಿ ಹಾಗೂ ಕಾನ್‌ಸ್ಟೆಬಲ್‌ ರೌಶನ್‌ ಕುಮಾರ್‌(23) ಮೃತಪಟ್ಟವರು.

ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ನಡೆಸಿ ಯೋಧರು ಮರಳುತ್ತಿದ್ದಾಗ ಪುಷ್ಪಲ್‌ ಗ್ರಾಮದ ಸಿಆರ್‌ಪಿಎಫ್‌ ಶಿಬಿರದ ಬಳಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಬಸ್ತಾರ್ ಮತ್ತು ದಾಂತೇವಾಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಿಆರ್‌ಪಿಎಫ್‌ ಯೋಧರು ವ್ಯಾಪಕ ಶೋಧ ಕಾರ್ಯ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.