ADVERTISEMENT

ಹಿಟ್‌ ಆ್ಯಂಡ್‌ ರನ್‌: ರಜೆ ಮುಗಿಸಿ ಕರ್ತವ್ಯಕ್ಕೆ ಮರಳುತ್ತಿದ್ದ CRPF ಯೋಧ ಸಾವು

ಪಿಟಿಐ
Published 6 ಅಕ್ಟೋಬರ್ 2023, 10:08 IST
Last Updated 6 ಅಕ್ಟೋಬರ್ 2023, 10:08 IST
ಸಾವು (ಪ್ರಾತಿನಿಧಿಕ ಚಿತ್ರ)
ಸಾವು (ಪ್ರಾತಿನಿಧಿಕ ಚಿತ್ರ)   

ಲಾತೂರ್‌: ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯಲ್ಲಿ ಅಪರಿಚಿತ ವಾಹನವೊಂದು ಗುದ್ದಿದ ಪರಿಣಾಮ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಬೆಳಿಗ್ಗೆ 6.30 ಹೊತ್ತಿಗೆ ಲಾತೂರ್‌–ನಾಂದೇಡ್‌ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ವಿಶಾಖಪಟ್ಟಣ ನಿವಾಸಿ ಲಿಂಗುಬೆರು ರವಿ (41) ಎಂಬವರೇ ಮೃತಪಟ್ಟವರು.

ADVERTISEMENT

ಹೆದ್ದಾರಿಯ ಭಟಂಗಲಿ ಹಾಗೂ ಮಮ್‌ದಾಪುರ ಗ್ರಾಮಗಳ ನಡುವೆ ಅಪರಿಚಿತ ವಾಹನವೊಂದು ಅವರ ಮೇಲೆ ಹರಿದಿದೆ. ಸ್ಥಳದಲ್ಲೇ ಅವರು ಕೊನೆಯುಸಿರೆಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ ಅವರು ಗುರುವಾರ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.