ADVERTISEMENT

ಉಗ್ರರ ದಾಳಿಗೆ ಸಿಆರ್‌ಪಿಎಫ್‌ ಅಧಿಕಾರಿ ಬಲಿ

ಪಿಟಿಐ
Published 17 ಜುಲೈ 2022, 15:53 IST
Last Updated 17 ಜುಲೈ 2022, 15:53 IST
   

ಶ್ರೀನಗರ: ಪುಲ್ವಾಮ ಪ್ರದೇಶದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಬ್‌ಇನ್‌ಸ್ಪೆಕ್ಟರ್‌ ವಿನೋದ್‌ ಕುಮಾರ್‌ ಭಾನುವಾರ ಮೃತಪಟ್ಟಿದ್ದಾರೆ.

ದಕ್ಷಿಣ ಕಾಶ್ಮೀರದ ಗಂಗೂ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್‌ ಹಾಗೂ ಸಿಆರ್‌ಪಿಎಫ್‌ ತಂಡದ ಮೇಲೆ ಮಧ್ಯಾಹ್ನ 2.20ರ ವೇಳೆಗೆ ಉಗ್ರರು ದಾಳಿ ಮಾಡಲಾರಂಭಿಸಿದರು. ಗಾಯಗೊಂಡವಿನೋದ್‌ ಕುಮಾರ್‌ ಅವರನ್ನು ತಕ್ಷಣವೇ ಪುಲ್ವಾಮದಲ್ಲಿರುವ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT