ಶ್ರೀನಗರ: ಜಮ್ಮು–ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳ ಮೇಲೆಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸಿಆರ್ಪಿಎಫ್ ಯೋಧ ಮತ್ತು ಅಪ್ರಾಪ್ತ ಬಾಲಕ ಮೃತಪಟ್ಟಿದ್ದಾರೆ.
‘ಮಧ್ಯಾಹ್ನ 12.10ರ ಸುಮಾರಿಗೆಪಾದಶಾಹಿಬಾಗ್ ಸೇತುವೆ ಬಳಿ ಇರುವಸಿಆರ್ಪಿಎಫ್ನ90ನೇ ಬೆಟಾಲಿಯನ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು.ಈ ವೇಳೆ ಬಾಲಕ ಮತ್ತು ಸಿಪಿಆರ್ಎಫ್ ಯೋಧ ಗಂಭೀರವಾಗಿ ಗಾಯಗೊಂಡರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.
ಸಿಆರ್ಪಿಎಫ್ ಯೋಧ ಶಾಮಲ್ ಕುಮಾರ್ ಮತ್ತು ಬಾಲಕ ನಿಹಾನ್ ಯಾವರ್ ಸಾವನ್ನಪ್ಪಿದ್ದು ಉಗ್ರರಿಗಾಗಿ ಭದ್ರತಾ ಪಡೆ ಶೋಧ ಕಾರ್ಯ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.