ADVERTISEMENT

ಪಟಿಯಾಲ: ಎರಡು ಗುಂಪುಗಳ ನಡುವೆ ಘರ್ಷಣೆ– ಕರ್ಫ್ಯೂ ಜಾರಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಏಪ್ರಿಲ್ 2022, 13:42 IST
Last Updated 29 ಏಪ್ರಿಲ್ 2022, 13:42 IST
ಪಟಿಯಾಲದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ
ಪಟಿಯಾಲದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ   

ಚಂಡೀಗಢ: ಪಟಿಯಾಲಾದಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ಗುಂಪಿಗೆ ಸವಾಲೆಸೆದು ಮತ್ತೊಂದು ಗುಂಪು ಮೆರವಣಿಗೆಯನ್ನು ಆಯೋಜಿಸಿತ್ತು. ಈ ವೇಳೆ ಘರ್ಷಣೆ ಉಂಟಾಗಿ ಕತ್ತಿಗಳು ಮತ್ತು ಹರಿತವಾದ ಆಯುಧಗಳನ್ನು ಝಳಪಿಸುತ್ತಾ, ಕಾದಾಡುತ್ತಿದ್ದ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿವೆ.

ಹೀಗಾಗಿ ಇಂದು ರಾತ್ರಿ 7 ಗಂಟೆಯಿಂದ ಮುಂಜಾನೆ 6ಗಂಟೆವರೆಗೆ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಲಾಗಿದೆ.

ADVERTISEMENT

ಈ ಘಟನೆ ದುರದೃಷ್ಟಕರ. ಈ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಸಂಬಂಧ ಡಿಜಿಪಿಯೊಂದಿಗೆ ಮಾತನಾಡಿದ್ದೇನೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ರಾಜ್ಯದಲ್ಲಿ ಶಾಂತಿ ಕದಡುವ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.