ಶಿಲ್ಲಾಂಗ್: ಮೇಘಾಲಯದ ಪೂರ್ವ ಖಾಶಿ ಪರ್ವತ ಪ್ರದೇಶದಲ್ಲಿ ಸಿಎಎ ಪರ–ವಿರೋಧಿ ಗುಂಪುಗಳ ನಡುವೆ ಬುಗಿಲೆದ್ದ ಸಂಘರ್ಷದಲ್ಲಿ ಇಬ್ಬರ ಹತ್ಯೆಯಾಗಿದ್ದು, ಹಲವರಿಗೆ ಗಾಯಗಳಾಗಿವೆ.
ಖಾಶಿ ವಿದ್ಯಾರ್ಥಿ ಸಂಘಟನೆ ಮತ್ತು ಬುಡಕಟ್ಟು ಜನಾಂಗಕ್ಕೆ ಸೇರದ ಜನರ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.
ಘಟನೆಯಲ್ಲಿ ಖಾಶಿ ವಿದ್ಯಾರ್ಥಿ ಸಂಘಟನೆಯ ಸದಸ್ಯ ಸೇರಿದಂತೆ ಇನ್ನೊಬ್ಬ ಯುವಕ ಚಾಕು ಇರಿತದಿಂದ ಮೃತ ಪಟ್ಟಿದ್ದಾರೆ.
ಮೇಘಾಲಯ ರಾಜಧಾನಿ ಶಿಲ್ಲಾಂಗ್ನಿಂದ 90 ಕಿ.ಮೀ ದೂರವಿರುವ ಖಾಶಿ ಪರ್ವತ ಪ್ರದೇಶದಲ್ಲಿ ಬಿಗುವಿನ ವಾತಾವರಣವಿದ್ದು, ಶಾಂತಿ ಕಾಪಾಡಲು ರಾಜ್ಯ ಸರ್ಕಾರ ಜನರಿಗೆ ಮನವಿ ಮಾಡಿದೆ.
ಶಿಲ್ಲಾಂಗ್ ಸೇರಿದಂತೆ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. 6 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.