ADVERTISEMENT

Rajya Sabha: ಕಾಂಗ್ರೆಸ್ ಸಂಸದನ ಆಸನದಲ್ಲಿ ನೋಟಿನ ಕಂತೆ ಪತ್ತೆ, ತನಿಖೆಗೆ ಆದೇಶ

ಪಿಟಿಐ
Published 6 ಡಿಸೆಂಬರ್ 2024, 7:29 IST
Last Updated 6 ಡಿಸೆಂಬರ್ 2024, 7:29 IST
<div class="paragraphs"><p>ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್</p></div>

ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್

   

(ಪಿಟಿಐ ಚಿತ್ರ)

ನವದೆಹಲಿ: 'ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ' ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಇಂದು (ಶುಕ್ರವಾರ) ತಿಳಿಸಿದ್ದಾರೆ.

ADVERTISEMENT

ಗುರುವಾರ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ ವೇಳೆ ಆಸನ ಸಂಖ್ಯೆ 222ರಲ್ಲಿ ಭದ್ರತಾ ಸಿಬ್ಬಂದಿ ಕಂತೆ ಕಂತೆ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಸದನದ ಶಿಷ್ಟಾಚಾರದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

'ಈ ಕುರಿತು ಸದನಕ್ಕೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ನೋಟುಗಳು ನಕಲಿಯೋ ಅಥವಾ ಅಸಲಿಯೋ ಎಂಬುದು ತಿಳಿದು ಬಂದಿಲ್ಲ' ಎಂದು ಅವರು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಸಭಾಪತಿ ಹೇಳಿಕೆ ಗದ್ದಲಕ್ಕೆ ಕಾರಣವಾಯಿತು. ತನಿಖೆ ಪೂರ್ಣಗೊಳ್ಳದ ಹೊರತು ಸಭಾಪತಿ ಸದಸ್ಯರ ಹೆಸರು ಹೇಳಬಾರದಿತ್ತು ಎಂದು ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.