ADVERTISEMENT

ತೀವ್ರಗೊಳ್ಳಲಿದೆ ಅಸನಿ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರಿ ಗಾಳಿ, ಮಳೆ ಸಾಧ್ಯತೆ

ಪಿಟಿಐ
Published 8 ಮೇ 2022, 5:30 IST
Last Updated 8 ಮೇ 2022, 5:30 IST
ಸಾಂದರ್ಭಿಕ ಚಿತ್ರ – ಪಿಟಿಐ
ಸಾಂದರ್ಭಿಕ ಚಿತ್ರ – ಪಿಟಿಐ   

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಭಾನುವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ.

‘ಅಸನಿ’ ಚಂಡಮಾರುತವು ಇನ್ನಷ್ಟು ತೀವ್ರಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಗಾಳಿ ಮತ್ತು ಮಳೆಯಾಗುವ ಸಾಧ್ಯತೆ ಇದೆ. ಈಗಲೇ ಗಂಟೆಗೆ 75 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಈ ಚಂಡಮಾರುತವು ಭೂಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಕಡಿಮೆಯಾಗಿದ್ದು, ಈ ವಾರ ಮಧ್ಯಭಾಗದಲ್ಲಿ ದುರ್ಬಲಗೊಳ್ಳಲಿದೆ ಎನ್ನಲಾಗಿದೆ.

ADVERTISEMENT

ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವು‌ ವಾಯುವ್ಯಕ್ಕೆ ಚಲಿಸುವ ಮತ್ತು ಪೂರ್ವ ಮಧ್ಯ ಬಂಗಾಳಕೊಲ್ಲಿಯಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.